Advertisement

ಮಂಡ್ಯ : ಟಿಪ್ಪರ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು, ಪ್ರಾಣಾಪಾಯದಿಂದ ಪಾರಾದ ಪತಿ

05:25 PM Sep 23, 2020 | sudhir |

ಮಂಡ್ಯ: ಪಾದಚಾರಿ ಮಹಿಳೆಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು, ಪತಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮಧ್ಯಾಹ್ನ ನಡೆದಿದೆ.

Advertisement

ತಾಲ್ಲೂಕಿನ ಚೋಕನಹಳ್ಳಿ ಗ್ರಾಮದ ಬಸವರಾಜು ಅವರ ಪತ್ನಿ ಜ್ಯೋತಿ(28) ಮೃತಪಟ್ಟ ಮಹಿಳೆ.

ಬೂಕನಕೆರೆಯಿಂದ ಗ್ರಾಮಕ್ಕೆ ತನ್ನ ಪತಿ ಬಸವರಾಜು ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದರು. ಹೇಮಾವತಿ ನೀರಾವರಿ ಕಚೇರಿ ಮುಂಭಾಗ ಬರುತ್ತಿದ್ದಂತೆ ಬೂನಕೆರೆಯಿಂದ ಬಲ್ಲೇನಹಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಜಲ್ಲಿ ಕಲ್ಲು ಸಾಗಿಸುವ ಟಿಪ್ಪರ್ ಲಾರಿ ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂದೆ ಕುಳಿತ್ತಿದ್ದ ಜ್ಯೋತಿ ಆಯ ತಪ್ಪಿ ಕೆಳಗೆ ಬಿದ್ದಿದ್ದು, ಇದರಿಂದ ಅವರ ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬಸವರಾಜು ಸಣ್ಣಪುಟ್ಟ ಗಾಯಗಳಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಆಟವಾಡುತ್ತಾ ದಾರಿ ತಪ್ಪಿದ ಪುಟಾಣಿ ಮಗು! ವಾಟ್ಸ್‌ ಆ್ಯಪ್‌ನಿಂದ ಪಾಲಕರ ಮಡಿಲು ಸೇರಿತು

ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತ ಸಂಭವಿಸಲು ಕಾರಣವಾಗಿದ್ದು, ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಸ್ಥಳಕ್ಕೆ ಲಾರಿ ಮಾಲೀಕ ಬರಬೇಕು. ಚಾಲಕನನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಸ್ಥಳಕ್ಕೆ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದು, ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next