Advertisement

ಉಪ್ಪಿನಂಗಡಿ ಬಳಿ ಕಂಟೈನರ್ – ಜೀಪು ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

09:54 AM Dec 30, 2019 | keerthan |

ಉಪ್ಪಿನಂಗಡಿ: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪಿಗೆ ಕಂಟೈನರ್ ಒಂದು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿ ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಬೆದ್ರೋಡಿಯಲ್ಲಿ ನಡೆದಿದೆ.

Advertisement

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬೆದ್ರೋಡಿ ಬಳಿ ಈ ಘಟನೆ ಸಂಭವಿಸಿದೆ.  ಘಟನೆಯಲ್ಲಿ ಜೀಪು ಚಾಲಕ ಸಿದ್ದಿಕ್ ಮೃತಪಟ್ಟಿದ್ದಾರೆ. ಜೀಪಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರಗೆ ದಾಖಲಿಸಲಾಗಿದೆ.

ಜೀಪು ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿತ್ತು. ಕಂಟೈನರ್- ಜೀಪು ಡಿಕ್ಕಿಯಾದ ಪರಿಣಾಮ ರಸ್ತೆಯಲ್ಲಿ ಸಂಚಾರ ವ್ಯವಸ್ಥೆಗೆ ಸ್ವಲ್ಪ ಮಟ್ಟಿನ ಅಡಚಣೆಯಾಗಿದೆ.

ಪುತ್ತೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next