Advertisement

ರಸ್ತೆ ಅಪಘಾತ: ನಿವೃತ್ತ ಕಂದಾಯ ಅಧಿಕಾರಿ ಸಾವು

01:40 AM Jun 05, 2019 | sudhir |

ಮಡಿಕೇರಿ: ಕೊಣನೂರು- ಮಾಕುಟ್ಟ ರಾಜ್ಯ ಹೆದ್ದಾರಿಯ ತೊರೆನೂರು ಬಳಿ ಮಂಗಳವಾರ ಬೆಳಗ್ಗೆ ಲಾರಿ ಮತ್ತು ಕಾರು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಕಂದಾಯ ಇಲಾಖೆಯ ನಿವೃತ್ತ ಸಹಾಯಕ ಕಮಿಷನರ್‌ ಡಾ| ಕೆ.ಎ. ಅಪ್ಪಯ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Advertisement

ಡಾ| ಅಪ್ಪಯ್ಯ (65) ಅವರು ಬೆಂಗಳೂರಿನಿಂದ ಕುಶಾಲನಗರ ಮೂಲಕ ತಮ್ಮ ಊರಿಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಪತ್ನಿ ಮೀನಾಕ್ಷಿ ಅವರಿಗೂ ತೀವ್ರ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಲಾಗಿದೆ.

ಅವರು ಪತ್ನಿ, ಇಬ್ಬರು ಪುತ್ರಿ ಯರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next