Advertisement
ಕೋಟೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂವತ್ತು ವರ್ಷಗಳಿಂದ ಚಿತ್ರಕಲಾ ಶಿಕ್ಷಕರಾಗಿದ್ದ ಹೆಮ್ಮಾಡಿ ನಿವಾಸಿ ಭೋಜು ಹಾಂಡ ಕಳೆದ ಕೆಲವು ವರ್ಷಗಳಿಂದ ಹೆಮ್ಮಾಡಿ ಹಾಗೂ ಕಟ್ಬೇಲೂ¤ರಿನಲ್ಲಿ ಯೋಗ ತರಬೇತಿ ನೀಡುತ್ತಿದ್ದರು. ಶನಿವಾರ ಹೆಮ್ಮಾಡಿಯ ತರಗತಿಗೆ ಹೋಗಿ ಯೋಗದ ಪರಿಕರ ತೆಗೆದುಕೊಂಡು ಕಟ್ಬೇಲೂ¤ರಿಗೆ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ. ಬೈಕ್ ಹಿಂಬದಿ ಕುಳಿತಿದ್ದ ಅರ್ಪಿತಾ (11) ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ದ್ದಾರೆ.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಭೋಜು ಹಾಂಡ 2013-14ನೇ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದರು. ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯೂ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದಲ್ಲಿ ನಿರ್ದೇಶಕರೂ ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಪ್ರಸ್ತುತ ಸಾಲಿನ ಅಧ್ಯಕ್ಷರೂ ಆಗಿದ್ದರು. ಇವರ ಪ್ರತಿಭೆಗೆ ಉತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಸೇರಿದಂತೆ ಅನೇಕ ಸಮ್ಮಾನಗಳಿಂದ ಪುರಸ್ಕೃತರಾಗಿದ್ದರು. ಮೃತರು ಉತ್ತಮ ಯೋಗ ಪಟುವೂ ಆಗಿದ್ದು, ಕಳೆದ 17 ವರ್ಷದಿಂದ ಡ್ರಾಯಿಂಗ್ ಹೈಯರ್ ಗ್ರೇಡ್ ಪರೀûಾ ಕೇಂದ್ರವನ್ನು ತಮ್ಮ ಶಾಲೆಯಲ್ಲಿ ನಡೆಸಿಕೊಂಡು ಬರುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.