Advertisement

ರಸ್ತೆ ಅಪಘಾತ: ಬೈಕ್‌ ಸವಾರ ಸಾವು

10:02 AM May 02, 2022 | Team Udayavani |

ಬೆಂಗಳೂರು: ಮುಂದೆ ಹೋಗುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದುಕೊಂಡು ದ್ವಿಚಕ್ರ ವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕಲಬುರಗಿ ಮೂಲದ ಮಧುಕುಮಾರ್‌(32) ಮೃತರು.

ಮಧುಕುಮಾರ್‌ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಶನಿವಾರ ಸಂಜೆ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ನೈಸ್‌ ರಸ್ತೆಯಲ್ಲಿ ಹೋಗುತ್ತಿದ್ದರು. ಕನಕಪುರ ಸೇತುವೆ ಬಳಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದು ಕೊಂಡಿದ್ದಾರೆ. ಈ ವೇಳೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅದನ್ನು ಗಮನಿಸಿದ ಸವಾರರು ಕೂಡಲೇ ಗಾಯಾಳು ಮಧುಕುಮಾರ್‌ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು.

ಮತ್ತೊಂದೆಡೆ ಮಧುಕುಮಾರ್‌ ವಾಹನ ಚಾಲನೆ ವೇಳೆ ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಅಪಘಾತವಾದಾಗ ತಲೆಗೆ ಗಂಭೀರ ಪೆಟ್ಟು ಬಿದ್ದು, ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು. ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next