Advertisement

ಹಳೆಯಂಗಡಿ: ಪಾದಾಚಾರಿಗೆ ಲಾರಿ ಡಿಕ್ಕಿ

01:48 PM Jun 29, 2019 | keerthan |

ಹಳೆಯಂಗಡಿ: ಇಂದು ಬೆಳಿಗ್ಗೆ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಪೇಟೆಯಲ್ಲಿ ನಡೆದಿದೆ.

Advertisement

ಬೆಂಗಳೂರಿನ ಆನೆಕಲ್ ಗ್ರಾಮದ ನಿವಾಸಿ ಮಂಜು (45) ಎಂಬುವವರು ಹಳೆಯಂಗಡಿ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ವೇಲೆ ಮಂಗಳೂರು ಕಡೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಬಳಿಕ ಪರಾರಿಯಾಯಿತು.

ತಕ್ಷಣ ಲಾರಿಯನ್ನು ಬೆನ್ನಟ್ಟಿದ ಸ್ಥಳೀಯ ದೈವಾರಧಕ ವಾಮನ ಪೂಜಾರಿ ಮತ್ತು ಯೋಗೀಶ್ ಎಂಬುವವರು ಪಾವಂಜೆ ಬಳಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ್ನನ್ನು ಘಟನಾ ಸ್ಥಳಕ್ಕೆ ಕರೆತರಲಾಯಿತು.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ರವರು ಸ್ಥಳಕ್ಕೆ ಆಗಮಿಸಿ ಆಂಬುಲೆನ್ಸ್ ತರಿಸಿ ಸ್ಥಳೀಯರ ಸಹಾಯದಿಂದ ಗಾಯಗೊಂಡ ವ್ಯಕ್ತಿಯನ್ನು ಮುಲ್ಕಿ ಸರಕಾರಿ ಅಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next