Advertisement

ಕೊಕ್ಕಡ: ರಸ್ತೆ ಅಪಘಾತ; ಗಾಯಾಳುಗಳನ್ನು ಸಾಗಿಸಲು ಬಂದ ಅಂಬ್ಯುಲೆನ್ಸ್ ಚರಂಡಿಗೆ

08:41 AM May 07, 2019 | keerthan |

ನೆಲ್ಯಾಡಿ: ಧರ್ಮಸ್ಥಳ – ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯ ಕೊಕ್ಕಡ ಪರ್ಪಿಕಲ್ಲು ಎಂಬಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಬೆಳಗ್ಗೆ 10.30 ರ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ಸುಮಾರು ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Advertisement

ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಪರ್ಪಿಕಲ್ ಕಾಪಿನಬಾಗಿಲು ಎಂಬಲ್ಲಿ ಅಲಂಕಾರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸೆಲಾರಿಯೋ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಸೆಲಾರಿಯೋ ಕಾರಿನಲ್ಲಿದ್ದ ಯಮುನಾ ( 40 ವರ್ಷ), ಧನ್ಯಾ (16 ವರ್ಷ) ಮೋಕ್ಷಿ ( 19 ವರ್ಷ), ಮುತ್ತಪ್ಪ (45 ವರ್ಷ), ಮೋಹಿನಿ (43 ವರ್ಷ) ಎಂದು ಗುರುತಿಸಲಾಗಿದೆ. ಆದರೆ ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದವರ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಅಂಬ್ಯುಲೆನ್ಸ್ ಚರಂಡಿಗೆ: ಈ ನಡುವೆ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬ್ಯಲೆನ್ಸ್ ಕೂಡಾ ಕೊಕ್ಕಡ ದ್ವಾರದ ಸಮೀಪ ಚರಂಡಿಗೆ ಬಿದ್ದಿದ್ದು ಆಂಬ್ಯುಲೆನ್ಸ್ ಚಾಲಕ ನವೀನ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಧಾವಂತದಲ್ಲಿ ವೇಗವಾಗಿ ಸಾಗುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚರಂಡಿಗೆ ಬಿದ್ದಿದೆ. ಈ ವೇಳೆ ಅಲ್ಲೇ ನಿಂತಿದ್ದ ಸ್ಕೂಟರ್ ಸವಾರರೊಬ್ಬರು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ .


ನೆಲ್ಯಾಡಿ ಹೊರಠಾಣಾ ಪೊಲೀಸರು ಮತ್ತು ಹೈವೇ ಪ್ಯಾಟ್ರೋಲ್ ಪೊಲೀಸರು ಅಪಘಾತ ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next