Advertisement

ರಸ್ತೆ ಅಪಘಾತ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ; ಮಾನವೀಯತೆ ಮೆರೆದ ಕೋಟಾ ಶ್ರೀನಿವಾಸ್ ಪೂಜಾರಿ

03:09 PM Jun 23, 2021 | Team Udayavani |

ಮಂಗಳೂರು: ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಮುಲ್ಕಿ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ.

Advertisement

ಇಂದು ಮಧ್ಯಾಹ್ನ 12.20ರ ಸಮಯಕ್ಕೆ ರೇಣುಕಾ ಎಂಬವರು ಠಾಣೆಯಿಂದ ತಮ್ಮ ಹೊಂಡಾ ಆ್ಯಕ್ಟೀವಾ ವಾಹನದಲ್ಲಿ ಊಟಕ್ಕೆ ಮನೆಗೆ ಹೋಗುತ್ತಿರುವಾಗ ಈ ಅಪಘಾತವಾಗಿದೆ. ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ಇದ್ದುದರಿಂದ  ವಿಜಯ ಸನ್ನಿಧಿ ಜಂಕ್ಷನ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದೆ.

ಪರಿಣಾಮವಾಗಿ ರೇಣುಕಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಮ್ಮ ಕಾರ್ ನಲ್ಲಿ ಮುಲ್ಕಿ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next