Advertisement

ಬಸ್- ಸ್ಕೂಟರ್ ಡಿಕ್ಕಿಯಾಗಿ ಅಪ್ಪ- ಮಗ ಸ್ಥಳದಲ್ಲೇ ಸಾವು

09:57 AM Dec 09, 2019 | keerthan |

ಮೈಸೂರು: ಕೆ.ಎಸ್ಆರ್ ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪ್ಪ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Advertisement

ಮೈಸೂರು ತಾಲೂಕಿನ ಕೋಟೆ ಹುಂಡಿ ಸರ್ಕಲ್ ಬಳಿ ಈ ಘಟನೆ ನಡೆದಿದೆ.  ಪ್ರಕಾಶ್ (50) ಸುರೇಶ್ (23) ಮೃತಪಟ್ಟವರು.  ಮೃತರು ಕಟ್ಟೆ ಹುಣಸೂರು ನಿವಾಸಿಗಳಾಗಿದ್ದು ಮೈಸೂರಿನ ಜೆ.ಪಿ.ನಗರದ ಮಹದೇವು ಪರದಲ್ಲಿ ವಾಸವಿದ್ದರು.

ಪ್ರಕಾಶ್ ಮತ್ತು ಸುರೇಶ್ ರೇಷನ್ ಅಕ್ಕಿಗಾಗಿ ಥಂಬ್ ಇಂಪ್ರೆಷನ್ ಕೊಡಲು ಕಟ್ಟೆ ಹುಣಸೂರಿಗೆ ಡಿಯೋ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಯಮಸ್ವರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next