Advertisement

ಶಿವಮೊಗ್ಗ: ಲಾರಿ- ಬೈಕ್ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ದಾರುಣ ಸಾವು

03:53 PM Jul 21, 2020 | keerthan |

ಶಿವಮೊಗ್ಗ: ನಗರದಲ್ಲಿ ಇಂದು ಬೆಳಿಗ್ಗೆ ಭೀಕರ ಅಪಘಾತವೊಂದು ನಡೆದಿದ್ದು, ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

Advertisement

ಶಿವಮೊಗ್ಗ ವಿದ್ಯಾನಗರದ ದುರ್ಗಮ್ಮ ದೇವಸ್ಥಾನದ ಬಳಿ ಬಿ.ಹೆಚ್.ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಸಾಗುತ್ತಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮೃತರಾದವರನ್ನು ಗೊಂಧಿಚಟ್ನಹಳ್ಳಿಯ ನವೀನ್ (30) ಹಾಗೂ ಜಯಪ್ಪ (33) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಉಂಬ್ಳೇಬೈಲು ಬಳಿ ಮೀನು ಹಿಡಿಯಲು ತೆರಳುತ್ತಿದ್ದರು ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next