Advertisement

ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ತರಕಾರಿ ಟೆಂಪೋ: ಇಬ್ಬರು ಸ್ಥಳದಲ್ಲೇ ಸಾವು

01:54 PM Jun 18, 2020 | keerthan |

ಉಡುಪಿ: ಕುಂದಾಪುರದಿಂದ ಉದ್ಯಾವರಕ್ಕೆ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ.

Advertisement

ಚಾಲಕ ಸೇರಿದಂತೆ ಸಹ ಪ್ರಯಾಣಿಕ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಇಂದು ಮುಂಜಾನೆ 6.30 ರ ಸುಮಾರಿಗೆ ನಡೆದಿದೆ.

ಮೃತರು ಕಂದಾವರ ಹೇರಿಕೆರೆ ನಿವಾಸಿ ದಿನೇಶ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಇವರು ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದರು. ಇಂದು ಮುಂಜಾನೆ ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ಸಮಯದಲ್ಲಿ ಸ್ವಾಗತ ಕೋರುವ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ರವಾನಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next