Advertisement

ರಸ್ತೆ ಅಪಘಾತ: ಸಿಇಟಿ ಪರೀಕ್ಷೆ ಬರೆದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವು

04:41 PM Aug 01, 2020 | keerthan |

ಪುತ್ತೂರು: ಸಿಇಟಿ ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿಯೋರ್ವ ಮಡಿಕೇರಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

Advertisement

ಸಿಇಟಿ ಎರಡನೇ ದಿನದ ಪರೀಕ್ಷೆ ಮುಗಿಸಿ ಮನೆಗೆ ಹೋಗುತ್ತಿದ್ದ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್ (18 ವ) ಮೃತಪಟ್ಟವರು. ಅಪಘಾತದಲ್ಲಿ ಸ್ನೇಹಿತ ಸಿಬಿನ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ, ಸೋಮವಾರಪೇಟೆ ನಂಜರಾಯಪಟ್ಟಣದ ಶ್ರೇಯಸ್ ಹಾಗೂ ಅವರ ಸ್ನೇಹಿತ ಸಿಬಿನ್ ತಮ್ಮ ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನದಲ್ಲಿ ಪರೀಕ್ಷೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ಮಡಿಕೇರಿ ಸಂಪಿಗೆಕಟ್ಟೆ ಎಂಬಲ್ಲಿ ಕಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶ್ರೇಯಸ್ ಅವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡ ಸ್ನೇಹಿತ ಸಿಬಿನ್‌ ರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮಡಿಕೇರಿ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next