Advertisement

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 14 ಮಂದಿ ದುರ್ಮರಣ, ಹಲವರು ಗಂಭೀರ

08:52 AM Feb 14, 2021 | Team Udayavani |

ಕರ್ನೂಲ್ (ಆಂಧ್ರಪ್ರದೇಶ): ರವಿವಾರ ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

Advertisement

ಕರ್ನೂಲ್ ಜಿಲ್ಲೆಯ ವೆಲ್ದುರ್ತಿ ಮಂಡಲ್ ನ ಮಾದರ್ಪುರ ಗ್ರಾಮದಲ್ಲಿ ಬಸ್ ಮತ್ತು ಟ್ರಕ್ ನಡುವೆ ಈ ಭೀಕರ ಅಪಘಾತ ನಡೆದಿದೆ. ಬಸ್ ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಪ್ರಯಾಣಿಸುತ್ತಿತ್ತು. ಈ ವೇಳೆ ಲಾರಿ ಢಿಕ್ಕಿಯಾಗಿದೆ.

ಇದನ್ನೂ ಓದಿ:ಹೆಚ್ಚಿದ ಮೀಸಲು ಕೂಗು : ವೀರಶೈವ-ಲಿಂಗಾಯತದ ಎಲ್ಲ ಉಪಜಾತಿ ಒಬಿಸಿ ಸೇರ್ಪಡೆಗೆ ಆಗ್ರಹ

ಬಸ್ ನಲ್ಲಿ 18 ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ ಒಂದು ಮಗು, ಎಂಟು ಮಹಿಳೆಯರು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ:ಉಗ್ರರ ದಾಳಿಯಿಂದ ಸಂಯಮ ಕೆಣಕಿದ ಪಾಕಿಸ್ಥಾನಕ್ಕೆ ಭಾರತದ ತಕ್ಕ ಪಾಠ

Advertisement

Udayavani is now on Telegram. Click here to join our channel and stay updated with the latest news.

Next