Advertisement

ಕುರುಬರ ಸಮಾವೇಶಕ್ಕೆ ತೆರಳುವ ವೇಳೆ ಅಪಘಾತ: ವ್ಯಕ್ತಿ ಸಾವು, ಹಲವರಿಗೆ ಗಂಭೀರ ಗಾಯ

08:45 AM Feb 07, 2021 | Team Udayavani |

ಯಾದಗಿರಿ: ಬೆಂಗಳೂರಿನಲ್ಲಿ ನಡೆಯಲಿರುವ ಕುರುಬರ ಸಮಾವೇಶದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.

Advertisement

ಜಿಲ್ಲೆಯ ರಾಮಸಮುದ್ರ ಗ್ರಾಮದ ಕುರುಬ ಸಮಾಜದ ಜನರು ಗ್ರಾಮದಿಂದ ಬೆಂಗಳೂರಿಗೆ ರೈಲು ಮೂಲಕ ತೆರಳಲು ರಾತ್ರಿ ಟಂಟಂ ಆಟೋ ದಲ್ಲಿ ಯಾದಗಿರಿಗೆ ಬರುತ್ತಿದ್ದರು. ಈ ವೇಳೆ ನಗರದ ಹೊರವಲಯದಲ್ಲಿ ಆಟೋಗೆ ಲಾರಿ ಢಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಸಹದೇವಪ್ಪ (55) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರಿಗೆ ತೀವ್ರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next