ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ಬುಧವಾರ ಸಂಜೆ ಭಾರೀ ಗಾಳಿ ಮಳೆಯಾಗಿದ್ದು, ಬೃಹತ್ ಮರ ರಸ್ತೆ ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತು.
ಕೆಲವು ವಿದ್ಯುತ್ ಕಂಬಗಳು ಕೂಡ ಬಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತ ಗೊಂಡಿತು. ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮೆಸ್ಕಾಂ ಸಿಬಂದಿ ಆಗಮಿಸಿ ವಿದ್ಯುತ್ ತಂತಿ, ಕಂಬಗಳನ್ನು ತೆರವು ಮಾಡಿದರು. ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಮರಗಳನ್ನು ತೆರವು ಮಾಡಿದರು.
ಮರ ಬಿದ್ದು ಹಾನಿ
ಬಡಗನ್ನೂರು: ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಮೀನಾವು ಇಬ್ರಾಹಿಂ ಅವರ ದನದ ಹಟ್ಟಿಗೆ ಮೇಲೆ ಬುಧವಾರ ಸಂಜೆ ಮಳೆಯ ಸಂದರ್ಭ ಬೃಹತ್ ಗಾತ್ರದ ಮರ ಬಿದ್ದು ಹಾನಿ ಸಂಭವಿಸಿದೆ.
ವಿವಿಧೆಡೆ ಉತ್ತಮ ಮಳೆ
ಮಂಗಳೂರು/ ಉಡುಪಿ: ದ.ಕ., ಉಡುಪಿ, ಜಿಲ್ಲೆಯ ವಿವಿಧೆಡೆ ಬುಧ ವಾರ ರಾತ್ರಿ ಮಳೆಯಾಗಿದೆ. ಉಜಿರೆ, ಮುಂಡಾಜೆ, ಸುಬ್ರಹ್ಮಣ್ಯ, ಕಡಬ, ಮಣಿಪಾಲ, ಇಂದ್ರಾಳಿ, ಕುಂದಾಪುರದ ಬೆಳ್ವೆ, ಸಿದ್ದಾಪುರ ಮೊದಲಾದ ಭಾಗದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.
Related Articles
ಎಲ್ಲೋ ಅಲರ್ಟ್
ಕರಾವಳಿ ಭಾಗದಲ್ಲಿ ಜೂನ್ 1 ಮತ್ತು 4ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಬಿಸಿಲು ಮತ್ತು ಉರಿಸೆಕೆಯಿಂದ ಕೂಡಿತ್ತು.