Advertisement

Vitla: ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ತ; ಸಾರ್ವಜನಿಕರ ಪರದಾಟ

11:13 AM Sep 11, 2023 | Team Udayavani |

ವಿಟ್ಲ: ಪುಣಚದ ದೇವರಗುಂಡಿ ಮಣಿಲ ಕೂರೇಲು ಸ್ಮಶಾನ ರಸ್ತೆ ಮತ್ತೆ ಗುಡ್ಡ ಕುಸಿದು ಬಿದ್ದು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ.

Advertisement

ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಬದಿ ಕುಸಿಯುತ್ತಿದ್ದು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು  ಸಾಕಷ್ಟು ಬಾರಿ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಾಲೆಗೆ ತೆರಳುವ ಮಕ್ಕಳು, ಮಹಿಳೆಯರು ಸಂಕಷ್ಟಕ್ಕೊಳಗಾಗಿದ್ದಾರೆ.

ಕೆಲ ವರ್ಷಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿದ್ದ ಸಹಾಯಕ ಕಮೀಶನರ್ ಮಣ್ಣು ತೆಗೆದ ಜಾಗಕ್ಕೆ ಕಲ್ಲುಕಟ್ಟಿ ಕೊಡುವಂತೆ ಸೂಚಿಸಿದ್ದರು. ಅದರಂತೆ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡಿದ್ದರು.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದೆ ಇರುವುದರಿಂದ ರಸ್ತೆಯ ಬದಿ ಮತ್ತೆ ಮತ್ತೆ ಜರಿದು ಬಿದ್ದು ಅನಾಹುತಗಳಿಗೆ ಅವಕಾಶವಾಗುತ್ತಿದೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next