Advertisement

ನಿರಾಶ್ರಿತರಿಗೆ ಸೂಕ್ತ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆ

10:15 AM Aug 10, 2019 | Suhan S |

ಮುಧೋಳ: ಮುಧೋಳ ನಗರದ ಹಲವಾರು ವಾರ್ಡ್‌ಗಳಲ್ಲಿ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದವರಿಗೆ ಸೂಕ್ತ ಸೌಲಭ್ಯ ನೀಡುವಂತೆ ಆಗ್ರಹಿಸಿ ಕುಟುಂಬಸ್ಥರು, ಸಾರ್ವಜನಿಕರು ರಸ್ತೆಗಿಳಿದು ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ವಿಧಾನ ಪರಿಷತ್‌ ಸದಸ್ಯ ಆರ್‌.ಬಿ.ತಿಮ್ಮಾಪುರ ತಾಲೂಕಿನ ಎಲ್ಲ ಜನತೆ ಸಾಕಷ್ಟು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪರಿಹಾರ ಕಲ್ಪಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. ನಗರದಲ್ಲಿ ನಿರಾಶ್ರಿತರಿಗಾಗಿ ಸ್ಥಾಪಿಸಲಾಗಿರುವ ಗಂಜಿಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆಗಳಲ್ಲದೇ ಜನರು ಪರದಾಡುತ್ತಿದ್ದಾರೆ ಎಂದು ತಿಮ್ಮಾಪುರ ತಿಳಿಸಿದರು.

ಪ್ರತಿಭಟನೆಗೆ ಬೆಂಬಲಿಸಿ ಸತೀಶ ಬಂಡಿವಡ್ಡರ, ಎಚ್.ಎಮ್‌.ತುಳಸಿಗೇರಿ, ಉದಯ ಫಡತರೆ, ರವಿ ಕಾಂಬಳೆ, ಉದಯ ಕಾಂಬಳೆ, ಹೊಳಬಸು ತೇಲಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪಿಡಿ ವಿಜಯಕುಮಾರ ಮಕ್ಕಳಕಿ ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next