Advertisement

Vijayapura: ದೇವರ ದರ್ಶನಕ್ಕೆ ಹೊರಟಿದ್ದ ಬಾಲಕಿ ಅಪಘಾತದಲ್ಲಿ ಸಾವು

03:28 PM Dec 13, 2023 | Kavyashree |

ವಿಜಯಪುರ: ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಬೈಕ್‍ಗೆ ಡಿಕ್ಕಿಯಾಗಿ ದೇವರ ದರ್ಶನಕ್ಕೆ ಹೊರಟಿದ್ದ ಬೆಳಗಾವಿ ಜಿಲ್ಲೆಯ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕಿಯ ತಂದೆ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಕೋಟಾ ಬಳಿ ಡಿ.13ರ ಬುಧವಾರ ನಡೆದಿದೆ.

Advertisement

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಡ್ಡರಟ್ಟಿ ಗ್ರಾಮದ 15 ವರ್ಷದ ಸವಿತಾ ಪೂಜಾರಿ ಮೃತ ಬಾಲಕಿಯನ್ನು ಎಂದು ಗುರುತಿಸಲಾಗಿದೆ.

ಮೃತ ಬಾಲಕಿಯ ತಂದೆ ಮುದಗೊಂಡ ಪೂಜಾರಿ ಎಂಬವರು ಗಾಯಗೊಂಡಿದ್ದು, ವಿಜಯಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರದಿಂದ ಮುಂಬೈಗೆ ತೆರಳುತ್ತಿದ್ದ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ ಜಿಲ್ಲೆಯ ತಿಕೋಟ ಪಟ್ಟಣದಲ್ಲಿ ಬೈಕ್ ಸವಾರನಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಾಲಕಿ ದೂರಕ್ಕೆ ಹಾರಿಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಮುದಗೊಂಡ ಹಾಗೂ ಸವಿತಾ ತಿಕೋಟಾ ತಾಲೂಕಿನ ಅರಕೇರಿ ಅಮೋಘಸಿದ್ಧೇಶ್ವರ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ ತಿಕೋಟ ಬಳಿ ಅಪಘಾತ ಸಂಭವಿಸಿದ್ದು, ಪೊಲೀಸರು ಬಸ್ ಚಾಲಕನನ್ನು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ತಿಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next