Advertisement

ಗುಂಡಿ ಅಗೆದು ಗಡಿ ಸಂಪರ್ಕ ರಸ್ತೆ ಬಂದ್‌

03:44 PM Apr 21, 2020 | mahesh |

ಗುಡಿಬಂಡೆ: ಕೋವಿಡ್-19 ವೈರಸ್‌ ಭೀತಿ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ – ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಗ್ರಾಮೀಣ ಭಾಗಗಳ ಸಂಪರ್ಕ ರಸ್ತೆಗಳಲ್ಲಿ ಜೆಸಿಬಿಯಿಂದ ಗುಂಡಿ ತೆಗೆಯುವ ಮೂಲಕ ವಾಹನ ಓಡಾಟ  ಸಂಪೂರ್ಣ ಬಂದ್‌ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಎಲ್ಲೋಡು ಗ್ರಾಮ ಪಂಚಾಯಿತಿ ಪಿಡಿಒ ಫ‌ಣೀಂದ್ರ ಬಿ.ಆರ್‌. ತಿಳಿಸಿದ್ದಾರೆ.

Advertisement

ತಾಲೂಕಿನ ಆಂಧ್ರ-ಕರ್ನಾಟಕ ಗಡಿ ಭಾಗದ ಹಿಂದೂ ಪೂರದ ಸುತ್ತಮುತ್ತಲಿನ ಎಲ್ಲಾ ಗ್ರಾಪಂ ಪಿಡಿಒ ಹಾಗೂ ಜನಪ್ರತಿನಿಧಿಗಳು ಮತ್ತು ಕೊರೊನಾ ಜಾಗೃತಿ ಸಮಿತಿ ಸಭೆ ನಡೆಸಿ ಆಂಧ್ರದಿಂದ ಯಾರೊಬ್ಬರೂ ಹಾಗೂ ವಾಹನಗಳು ಬರುವಂತಿಲ್ಲ. ಇಲ್ಲಿಂದ ಯಾರೂ ಹೋಗುವಂತಿಲ್ಲ. ಬೇರೆ ಪ್ರದೇಶಗಳಿಂದ ಗ್ರಾಪಂ ವಿವಿಧ ಗ್ರಾಮಗಳಿಗೆ ಬಂದಿರುವ ಸುಮಾರು 25 ಜನರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ರಾಮೀಣ ಭಾಗಗಳ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಅಧಿಕಾರಿಗಳು ಮತ್ತು ಸ್ವಯಂ ಸೇವಕರು ಒದಗಿಸುತ್ತಿದ್ದಾರೆ.
ಗ್ರಾಮಗಳಿಂದ ಮತ್ತೂಂದು ಗ್ರಾಮಗಳಿಗೆ ವಿನಾಕಾರಣ ಓಡಾಡುವುದನ್ನು ನಿಲ್ಲಿಸಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ. ಅನವಶ್ಯವಾಗಿ ಮನೆಯಿಂದ ಹೊರಗೆ ಬರಬೇಡಿ ಎಂದು ಸಾರ್ವಜನಿಕರಿಗೆ ಎಲ್ಲೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎನ್‌.ಮಂಜುನಾಥ ಮನವಿ ಮಾಡಿದ್ದಾರೆ.

ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬೀಟ್‌ ಪೊಲೀಸರು, ಹೋಂ ಗಾರ್ಡ್‌ಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರುರು, ಆರೋಗ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಈ ಕಾರ್ಯದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next