Advertisement

ರಸ್ತೆ ಅಭಿವೃದ್ಧಿಗೆ ಅನುದಾನ : ಡಾ|ಅಜಯಸಿಂಗ್‌

08:21 PM Apr 04, 2021 | Team Udayavani |

ಜೇವರ್ಗಿ: ತಾಲೂಕಿನ ಕೂಡಿ ದರ್ಗಾ ಬಳಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ನಿರ್ಮಾಣಕ್ಕೆ 30 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

Advertisement

ತಾಲೂಕಿನ ಕೂಡಿ ದರ್ಗಾ ಬಳಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. 30 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಸಿಸಿ ರಸ್ತೆ, ಒಳ ಚರಂಡಿ ಕಾಮಗಾರಿ ಕೈಗೊಂಡಿದ್ದು, ನಿಗದಿತ ಹಾಗೂ ಗುಣಮಟ್ಟದ ಕಾಮಗಾರಿಗೆ ಒತ್ತು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಭಾಗದ ಹತ್ತಾರು ಹಳ್ಳಿಗಳಿಗೆ ಹಾಗೂ ಜಿಲ್ಲಾ ಕೇಂದ್ರ ಸ್ಥಾನ ಕಲಬುರಗಿಗೆ ತಲುಪಲು ಕೋನಾಹಿಪ್ಪರಗಾ-ಸರಡಗಿ ಸೇತುವೆ ಆಸರೆಯಾಗಿದೆ. ಈ ಸೇತುವೆ ನಿರ್ಮಾಣ ಮಾಡಿರುವುದರಿಂದ ಈ ಭಾಗದ ಜನರಿಗೆ ಕಡಿಮೆ ಸಮಯದಲ್ಲಿ ಜಿಲ್ಲಾ ಕೇಂದ್ರ ತಲುಪಲು ಸಹಕಾರಿಯಾಗಿದೆ ಎಂದರು.

ಮುಖಂಡರಾದ ರುಕುಂ ಪಟೇಲ ಇಜೇರಿ, ರುಕುಂ ಪಟೇಲ ಕೂಡಿ, ಮಹಿಬೂಬ ಪಟೇಲ ಕೋಬಾಳ, ಶಿವಣ್ಣಗೌಡ ಮಂದರವಾಡ, ಶಿವ ಶರಣಪ್ಪ ಕೋಬಾಳ, ಸುಭಾಷ ಹೂಗಾರ, ರಾಜಶೇಖರ ಸೀರಿ, ಗ್ರಾಪಂ ಅಧ್ಯಕ್ಷೆ ಗೌರಮ್ಮ ಶಾಂತಪ್ಪ, ಬಾಷಾ ಪಟೇಲ ಬಣಮಿ, ಮೀರಾ ಪಟೇಲ, ಮಲ್ಲು ಕರಕಿಹಳ್ಳಿ, ಮೈಲಾರಿ ಬಣಮಿ, ರೇವಣಸಿದ್ದಪ್ಪ ಕಮಾನಮನಿ, ರಿಯಾಜ್‌ ಪಟೇಲ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next