Advertisement

ಪಡೀಲ್‌-ವೀರನಗರ ಸಂಪರ್ಕ ರಸ್ತೆ ಅಭಿವೃದ್ಧಿ

01:18 AM Jun 09, 2020 | Team Udayavani |

ಮಹಾನಗರ: ಪಡೀಲ್‌ ರಾಷ್ಟ್ರೀಯ ಹೆದ್ದಾರಿಯಿಂದ ವೀರನಗರಕ್ಕೆ ತೆರಳುವ ರಸ್ತೆಯ ಅವ್ಯವಸ್ಥೆ ಕುರಿತು ಸಾರ್ವಜನಿಕ ದೂರಿನ ಮೇರೆಗೆ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಶಾಸಕ ಕಾಮತ್‌ ಮಾತನಾಡಿ, ಪಡೀಲ್‌ ರಾಷ್ಟ್ರೀಯ ಹೆದ್ದಾರಿಯಿಂದ ವೀರನಗರಕ್ಕೆ ತೆರಳುವ ರಸ್ತೆ ಅವ್ಯವಸ್ಥೆಯ ಕುರಿತು ಸಾರ್ವಜನಿಕ ದೂರು ಬಂದ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ರಾಷ್ಟ್ರೀಯ ಹೆದ್ದಾರಿ ಮೂಲಕ ವೀರನಗರ ಸಂಪರ್ಕ ರಸ್ತೆ ಅಭಿವೃದ್ಧಿಪಡಿಸಿದರೆ ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ವೀರನಗರ ಭಾಗಕ್ಕೆ ತೆರಳಲು ಜನ ರಿಗೆ ಅನಾನುಕೂಲವಾಗುವ ಕಾರ ಣ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ರಸ್ತೆ ಅಭಿವೃದ್ಧಿಯ ಕುರಿತು ಚರ್ಚಿಸಿದ್ದೇನೆ. ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಪಾಲಿಕೆ ಸದಸ್ಯೆ ಚಂದ್ರಾವತಿ ವಿಶ್ವನಾಥ್‌, ಮುಖಂಡರಾದ ವಿಶ್ವನಾಥ್‌, ವಸಂತ್‌ ಜೆ. ಪೂಜಾರಿ, ನರೇಶ್‌ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next