Advertisement

Road Misha ಪುತ್ತೂರು; ಟಿಪ್ಪರ್‌-ಬೈಕ್‌ ಢಿಕ್ಕಿ; ಶಿಕ್ಷಕಿ ಸಾವು

11:30 PM Jan 29, 2024 | Team Udayavani |

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ಟಿಪ್ಪರ್‌ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸಹಸವಾರೆ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.

Advertisement

ಇಡಿRದು ಗ್ರಾಮದ ಮಿತ್ತೂರು ಮದಕ ಸುರೇಶ್‌ ಕುಲಾಲ್‌ ಅವರ ಪತ್ನಿ ಮಾಣಿ ಖಾಸಗಿ ಶಾಲೆಯ ಶಿಕ್ಷಕಿ ಅನಿತಾ (35) ಮೃತಪಟ್ಟವರು.

ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಅನಿತಾ ಅವರು ಜ. 29ರಂದು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಪತಿ ಸುರೇಶ್‌ ಹಾಗೂ 5 ವರ್ಷದ ಪುತ್ರಿಯ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಏಕಾಏಕಿ ಬಂದ ಟಿಪ್ಪರ್‌ ಢಿಕ್ಕಿ ಹೊಡೆದಿದೆ.

ಅಪಘಾತದ ವೇಳೆ ಸಹಸವಾರೆ ಅನಿತಾ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next