Advertisement

ರಸ್ತೆ ಅಪಘಾತ : ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಸಾವು

07:51 PM Sep 19, 2021 | Team Udayavani |

ಕಲಬುರಗಿ: ರಸ್ತೆ ಅಪಘಾತದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಸಾವನ್ನಪಿದ ಘಟನೆ ಸಂಭವಿಸಿದೆ.

Advertisement

ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾಗಿದ್ದ ಲಿಂಗರಾಜ ಶಾಸ್ತ್ರೀ (50) ಘಟನೆಯಲ್ಲಿ ಸಾವನ್ನಪಿದ್ದವರು.

ಭಾನುವಾರ ಬಸವಕಲ್ಯಾಣ ತಾಲೂಕಿನ ಹಣಮಂತ ವಾಡಿ ಬಳಿ ರಸ್ತೆ ತಿರುವಿನಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಶಾಸ್ತ್ರಿ ಅವರ ಜತೆ ಮಡದಿ, ಮಗ ಕೂಡ ಪ್ರಯಾಣ ಮಾಡುತ್ತಿದ್ದರು. ಮಗ ಮತ್ತು ಪತ್ನಿಗೆ ಸಹ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತವಾದ ಸ್ಥಳದಲ್ಲಿದ್ದ ಮರದಲ್ಲಿ ಜೇನುಗೂಡು ಇದ್ದ ಪರಿಣಾಮ ಜೇನು ನೋಣಗಳು ಕಾರಿನ ಸುತ್ತ ಆವರಿಸಿಕೊಂಡು ಕಾರಿನಲ್ಲಿದ್ದವರಿಗೆ ಕಚ್ಚಿ ಗಾಯಗೊಳಿಸಿವೆ.

ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು ಶರಣ ಬಸವೇಶ್ವರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಆರಂಭಿಸಿದ್ದ ನಂತರ ಶರಣಬಸವ ವಿಶ್ವ ವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ)ರಾಗಿ ಸೇವೆ ಸಲ್ಲಿಸುತ್ತಿದ್ದರು.

Advertisement

ಶಾಸ್ತ್ರೀ ಅವರ ನಿಧನಕ್ಕೆ ಶರಣಬಸವ ವಿಶ್ವ ವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ, ಕುಲಪತಿ ಡಾ. ನಿರಂಜನ ನಿಷ್ಠಿ ಹಾಗೂ ವಿವಿ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

ಘಟನೆ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಬಸಲಿಂಗಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next