Advertisement

ಬೈಕಿಗೆ ಕಬ್ಬಿನ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

07:11 PM Oct 06, 2020 | sudhir |

ಶ್ರೀರಂಗಪಟ್ಟಣ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಕುವೆಂಪು ವೃತ್ತದ ಬಳಿ ನಡೆದಿದೆ.

Advertisement

ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಬೆಟ್ಟೇಗೌಡ ಪುತ್ರ ಬಿ.ಹನುಮಂತು (48) ಮೃತ ಬೈಕ್ ಸವಾರ. ಹಾಲಿ ಪಟ್ಟಣದಲ್ಲಿ ವಾಸಿಯಾಗಿದ್ದ ಮೃತ ಹನುಮಂತು ಸೋಮವಾರ ಮಧ್ಯಾಹ್ನ ತಮ್ಮ ಸ್ವಗ್ರಾಮ ಬಲ್ಲೇನಹಳ್ಳಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮೈಸೂರು ಕಡೆಯಿಂದ ಕಬ್ಬು ತುಂಬಿಕೊಂಡು ಪಾಂಡವಪುರ ಕಡೆಗೆ ತೆರಳುತ್ತಿದ್ದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿಯ ಚಕ್ರ ಹರಿದು ಭೀಕರವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಸ್ಥಳದಿಂದ ಕಬ್ಬಿನ ಲಾರಿ ಚಾಲಕ ಪರಾರಿಯಾಗಿದ್ದು, ಶೀಘ್ರ ಮಾಹಿತಿ ಆಧಾರದ ಹಿನ್ನೆಲೆ ಕಿರಂಗೂರು ಸಮೀಪದ ಮೂಲೆ ಮಂಟಪದ ಬಳಿ ಪೊಲೀಸರು ಲಾರಿಯನ್ನು ಅಡ್ಡಗಟ್ಟಿದ್ದಾರೆ.

ಇದನ್ನೂ ಓದಿ :ಟ್ರಂಪ್‌ ಡಿಸ್ಚಾರ್ಜ್‌; ಶ್ವೇತ ಭವನದಲ್ಲಿ ಮಾಸ್ಕ್‌ ತೆಗೆದು ಹಾಕಿ need not fear ಎಂದರು

ಅಪಘಾತದಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು, ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next