Advertisement

ಮಂಗಳೂರು ರಸ್ತೆ ಅಪಘಾತ : ಸ್ಕೂಟರ್ ಸವಾರ ಬಾವಿಗೆ ಬಿದ್ದು ಸಾವು

09:06 PM Jan 04, 2021 | Team Udayavani |

ಮಂಗಳೂರು : ಚಲಿಸುತ್ತಿದ್ದ ಸ್ಕೂಟರೊಂದು ಸ್ಕಿಡ್ ಆದ ಪರಿಣಾಮ ಸವಾರ ಆಯತಪ್ಪಿ ಪಕ್ಕದಲ್ಲೇ ಇದ್ದ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ಸೋಮವಾರ ನಡೆದಿದೆ.

Advertisement

ಅಪಘಾತದಲ್ಲಿ ಮೃತ ವ್ಯಕ್ತಿಯನ್ನು ಅಜಿತ್ ಎನ್ನಲಾಗಿದೆ.

ರಾತ್ರಿ ಸುಮಾರು 7:15ರ ವೇಳೆಗೆ ಬಜಾಲ್ ಜನ ನಿಬಿಡವಾದ ಎತ್ತರದ ಪ್ರದೇಶದಲ್ಲಿ ಚಲಿಸುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಇದ್ದ ಆವರಣ ಇರುವ ಬಾವಿಗೆ ಬಿದ್ದಿದ್ದಾನೆ.

ಘಟನೆ ನಡೆದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ದೌಡಾಯಿಸಿದ ಸಿಬಂದಿಗಳು ಬಾವಿಗೆ ಬಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ವ್ಯಕ್ತಿ ಸಾವನ್ನಪಿದ್ದ ಎನ್ನಲಾಗಿದೆ.

ಘಟನೆ ನಡೆದ ಸ್ಥಳ ಎತ್ತರದ ಪ್ರದೇಶವಾಗಿದ್ದರಿಂದ ಸ್ಕೂಟರ್ ಸವಾರನ ನಿಯಂತ್ರಣ ಕಳೆದು ಸ್ಕಿಡ್ ಆಗಿ ಬಿದ್ದಿದೆ, ಸ್ಕೂಟರ್ ಬಿದ್ದ ಕೆಲ ಭಾಗದಲ್ಲೇ ಬಾವಿ ಇದ್ದ ಪರಿಣಾಮ ಸವಾರ ಬಾವಿಯೊಳಗೆ ಬಿದ್ದಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next