Advertisement

Road Mishap ಶಾಲಾ ಬಸ್ಸಿಗೆ ಲಾರಿ ಢಿಕ್ಕಿ; ವಿದ್ಯಾರ್ಥಿನಿಗೆ ಗಾಯ

11:59 PM Jul 10, 2024 | Team Udayavani |

ಬಂಟ್ವಾಳ: ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವ ಶಾಲಾ ಬಸ್ಸಿಗೆ ಈಚರ್‌ ಲಾರಿ ಢಿಕ್ಕಿಯಾಗಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡ ಘಟನೆ ಬುಧವಾರ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ನಲ್ಲಿ ನಡೆದಿದೆ.

Advertisement

ಘಟನೆಯಲ್ಲಿ ವಿದ್ಯಾರ್ಥಿನಿ ಸಾರಾ ಇರಾನ್‌ ಇಬ್ರಾಹಿಂ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾಳೆ. ಬಸ್ಸು ಬಿ.ಸಿ.ರೋಡು ಭಾಗದಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಬ್ಬುಕಟ್ಟೆ ಭಾಗಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಶಾಲಾ ಬಸ್ಸಿನ ಚಾಲಕ ಬೆಳ್ಮ ಗ್ರಾಮ ನಿವಾಸಿ ಮೊಹಮ್ಮದ್‌ ಸುಹೈಲ್‌ ವಿದ್ಯಾರ್ಥಿನಿಯನ್ನು ಹತ್ತಿಸಲು ಬ್ರಹ್ಮರಕೂಟ್ಲು ನಲ್ಲಿ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದು, ಈ ವೇಳೆ ಚಾಲಕ ವೆಂಕಟೇಶ್‌ ಲಾರಿಯನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ.

ಈ ವೇಳೆ ಬಸ್ಸು ಏಕಾಏಕಿ ಮುಂದಕ್ಕೆ ಚಲಿಸಿದ್ದು, ಆಗ ಬಸ್ಸಿಗೆ ಹತ್ತುತ್ತಿದ್ದ ವಿದ್ಯಾರ್ಥಿನಿ ಹೊರಗೆ ಎಸೆಯಲ್ಪಟ್ಟಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next