Advertisement

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

01:50 AM Apr 30, 2024 | Team Udayavani |

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಎರಡೂ ಬೈಕ್‌ಗಳು ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ಸರ್ಕಲ್‌ ಬಳಿ ಸೋಮವಾರ ಸಂಭವಿಸಿದೆ.

Advertisement

ಬಾಳುಗೋಡಿನ ಯತೀಶ್‌ ಅವರು ಸುಳ್ಯದಿಂದ ಬಾಳುಗೋಡಿನತ್ತ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬರುತ್ತಿದ್ದ ಸತೀಶ್‌ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಎರಡೂ ಬೈಕ್‌ಗಳ ಸವಾರರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಪುತ್ತೂರು: ಅಡುಗೆ ಅನಿಲ ವಿತರಣ ಕಾಯಕ ಮಾಡುತ್ತಿದ್ದ ಬನ್ನೂರು ನಿವಾಸಿ ಸೀತಾರಾಮ ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 28ರಂದು ನಡೆದಿದೆ.

ಸೀತಾರಾಮ ಅವರು ಪುತ್ತೂರು ಗ್ಯಾಸ್‌ ಎಜೆನ್ಸಿಯ ಮೂಲಕ ಸುಳ್ಯ ಕಡೆಗೆ ಅಡುಗೆ ಅನಿಲ ವಿತರಣೆ ಮಾಡುತ್ತಿದ್ದರು. ಎ. 28ರಂದು ರಾತ್ರಿ ಅವರು ಆತ್ಮಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವ್ಯಕ್ತಿ ನಾಪತ್ತೆ; ದೂರು
ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕೆರೆಮೂಲೆ ದಿ| ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು. ಅವರು ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಎ. 27ರಂದು ಮನೆಯಿಂದ ಹೊರಗೆ ಹೋದವರುಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ದಿವಾಕರ ಅವರ ಮೊಬೈಲ್‌ ಸ್ವಿಚ್‌ಆಫ್‌ ಆಗಿದೆ ಎಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next