Advertisement

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

12:42 AM Apr 27, 2024 | Team Udayavani |

ಅರಂತೋಡು: ಬೈಕ್‌ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎನ್ನುವಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.

Advertisement

ಅರಂತೋಡು ಗ್ರಾಮದ ಬನ ನಿವಾಸಿ ಗಂಗಾಧರ ಅವರ ಮಗ ದರ್ಶನ್‌ (23) ಮೃತಪಟ್ಟ ಯುವಕ. ಸವಾರ ಅವಿನ್‌ (24) ಗಾಯಾಳು ಯುವಕ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಮಡಿಕೇರಿ ಕಡೆ ಹೋಗುತ್ತಿತ್ತು. ಬೈಕ್‌ ಅರಂತೋಡು ಕಡೆ ಬರುತ್ತಿತ್ತು. ದರ್ಶನ್‌ ಕೈಗಾರಿಕ ತರಬೇತಿ ಮುಗಿಸಿ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ. ಅವಿನ್‌ ಮಡಿಕೇರಿಯಲ್ಲಿ ಉದ್ಯೋಗದಲ್ಲಿದ್ದ. ದರ್ಶನ್‌ ಮಡಿಕೇರಿ ತನಕ ಬಸ್ಸಲ್ಲಿ ಬಂದು ಅನಂತರ ಇಬ್ಬರು ಬೈಕ್‌ನಲ್ಲಿ ಬರುವಾಗ ಅಪಘಾತ ಸಂಭವಿಸಿತ್ತು. ಅವರು ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಢಿಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರ ಗಂಭೀರ ಗಾಯಗೊಂಡು ಮೃತಪಟ್ಟರೆ, ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Advertisement

Udayavani is now on Telegram. Click here to join our channel and stay updated with the latest news.

Next