Advertisement

Road mishap: ಆಯ ತಪ್ಪಿ ಬಿದ್ದು ಬೈಕ್‌ ಸವಾರನಿಗೆ ತೀವ್ರ ಗಾಯ

11:49 AM Jan 09, 2024 | Team Udayavani |

ಬೆಂಗಳೂರು: ರಸ್ತೆ ಹಂಪ್‌ನಲ್ಲಿ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ರಸ್ತೆಗೆ ಬಿದ್ದ ಪರಿಣಾಮ ಸವಾರ ಗಾಯಗೊಂಡಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕಿರ್ಲೋಸ್ಕರ್‌ ಲೇಔಟ್‌ ನಿವಾಸಿ ಸುನೀಲ್‌ ಕುಮಾರ್‌ (53) ಗಾಯಗೊಂಡವರು. ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಕಿರ್ಲೋಸ್ಕರ್‌ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಸವಾರ ಸುನೀಲ್‌ ಕುಮಾರ್‌ ತಲೆಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಸುನೀಲ್‌ ಕುಮಾರ್‌ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಹಂಪ್‌ ಎದುರಾದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಆಗ ತಲೆಗೆ ಪೆಟ್ಟು ಬಿದ್ದಿದ್ದು, ಸ್ಥಳೀಯರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡಿದಾಗ ಹೃದಯ ಸಮಸ್ಯೆ ಇರುವುದು ಕಂಡು ಬಂದಿದ್ದು, ಚಿಕಿತ್ಸೆ ಮುಂದುವರೆದಿದೆ. ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು. ಈ ಸಂಬಂಧ ಪೀಣ್ಯ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next