Advertisement

ಬೆಂಗಳೂರಿನಲ್ಲಿ ಅಪಘಾತ: ಕೊಲ್ಲಮೊಗ್ರುವಿನ ಯುವಕ ಸಾವು

12:44 AM Apr 25, 2023 | Team Udayavani |

ಸುಳ್ಯ: ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.

Advertisement

ಸುಳ್ಯ ತಾ|ನ ಕೊಲ್ಲಮೊಗ್ರು ಧರ್ಮಪಾಲ ಗೌಡ ಬಾಳೆಬೈಲು ಮತ್ತು ಕಮಲಾಕ್ಷಿ ದಂಪತಿ ಪುತ್ರ ಯತೀಶ್‌ ಬಾಳೆಬೈಲು (30) ಮೃತ ಯುವಕ. ಯತೀಶ್‌ ಅವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಯತೀಶ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಿಸದೆ ಮೃತರಾಗಿದ್ದಾರೆ. ಅವಿವಾಹಿತರಾಗಿರುವ ಯತೀಶ್‌ ಅವರು ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next