Advertisement

Tragedy: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಮೃತ್ಯು

09:09 AM Oct 14, 2023 | Team Udayavani |

ರಾಮನಗರ: ಬೆಳ್ಳಂಬೆಳಿಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.

Advertisement

ರಾಜೇಶ್ (42), ಉಮಾ (35) ಸ್ಥಳದಲ್ಲೇ ಸಾವನಪ್ಪಿರುವ ದುದ್ರೈವಿಗಳು. ಬೆಂಗಳೂರಿನ ಪೀಣ್ಯ ಮೂಲದವರಾಗಿರೋ ರಾಜೇಶ್ ಕುಟುಂಬ.

ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಓಮ್ನಿ ಕಾರೊಂದು ಲಾರಿಯನ್ನು ಹಿಂದಿಕ್ಕುವ ಬರದಲ್ಲಿ ಎದುರಿಗೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.

ಬೆಂಗಳೂರನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿರುವ ಓಮ್ನಿ ಕಾರು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

Advertisement

ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೋಲಿಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Operation Ajay: ಇಸ್ರೇಲ್ ನಿಂದ 235 ಭಾರತೀಯರನ್ನು ಹೊತ್ತ ಎರಡನೇ ವಿಮಾನ ಭಾರತಕ್ಕೆ ಆಗಮನ

Advertisement

Udayavani is now on Telegram. Click here to join our channel and stay updated with the latest news.

Next