Advertisement

ROAD MISHAP: ಚಿಕ್ಕಮಗಳೂರು; ಬಸ್‌- ಕಾರು ಮುಖಾಮುಖಿ ಢಿಕ್ಕಿ; 9 ಮಂದಿ ಗಂಭೀರ

09:08 AM Sep 12, 2023 | Team Udayavani |

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಒಂಬತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಬೇಲೇನಹಳ್ಳಿ ಸಮೀಪ ಸಂಭವಿಸಿದೆ.

Advertisement

ಕೆಎಸ್ ಆರ್ ಟಿಸಿ ಬಸ್ ಶಿವಮೊಗ್ಗ ಕಡೆಯಿಂದ ತರೀಕೆರೆ ಮಾರ್ಗವಾಗಿ ಸಂಚರಿಸುತ್ತಿತ್ತು. ಕಾರಿನಲ್ಲಿದ್ದವರು ತರೀಕೆರೆಯಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದರು.

ಬಸ್ ಮತ್ತು ಕಾರು ನಡುವೆ ಬೇಲನಹಳ್ಳಿ ಗ್ರಾಮದ ಸಮೀಪ ಡಿಕ್ಕಿ ಸಂಭವಿಸಿದ್ದು ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನು ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದ್ದು, ಅಪಘಾತ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next