Advertisement

Crime: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು, ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ

10:50 AM Sep 06, 2023 | Team Udayavani |

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗ ಕಾರು ಬೈಕಿಗೆ ಗುದ್ದಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

Advertisement

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಾಲ್ತೇಶ್ ಎನ್ನಲಾಗಿದೆ.

KA 51 MD 9552 ರಿಜಿಸ್ಟರ್ ಹೊಂದಿದ ಕಾರು ಮಾಲ್ತೇಶ್ ಅವರ ಸ್ಕೂಟರಿಗೆ ಗುದ್ದಿದೆ. ಕಾರು ಡಿಕ್ಕಿ ಹೊಡೆದ ರಬಸಕ್ಕೆ ಮಾಲತೇಶ್ ಸ್ಥಳದಲ್ಲಿ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ.

ಡಿಕ್ಕಿ ಹೊಡೆದ ಕಾರು ಕಾಮಿಡಿ ಕಿಲಾಡಿ ಶೋ ನಾ ಚಂದ್ರಪ್ರಭ ಅವರಿಗೆ ಸೇರಿದ ಕಾರು ಎನ್ನಲಾಗುತ್ತಿದೆ.

ಅಪಘಾತ ಸಂಭವಿಸಿ ಮಾಲತೇಶ್ ಗಂಭೀರ ಗಾಯಗೊಂಡರು, ಕಾರು ಚಾಲಕ ಸ್ಥಳದಲ್ಲಿ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿರುವ ಮಾಲ್ತೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿ: Speeding van: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ವ್ಯಾನ್… 6 ಮಂದಿ ಸ್ಥಳದಲ್ಲೇ ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next