Advertisement

Chikkamagaluru: ಖಾಸಗಿ ಬಸ್ – ರಿಕ್ಷಾ ನಡುವೆ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು

12:47 PM Sep 14, 2024 | Team Udayavani |

ಚಿಕ್ಕಮಗಳೂರು: ಖಾಸಗಿ ಸಾರಿಗೆ ಬಸ್ ಆಟೊಗೆ ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ.

Advertisement

ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ..

ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಚಿಕ್ಕಮಗಳೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು ಗೇಟ್ ಎಂಬಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಆಟೊಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಅಟೊ ನಜ್ಜುಗುಜ್ಜಾಗಿದ್ದು ಆಟೊ ಚಾಲಕ ಚಂದ್ರಶೇಖರ್ ಹಾಗು ಪ್ರಯಾಣಿಕ ರಾಘವೇಂದ್ರ ಅವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಜಲಾವೃತಗೊಂಡ ಅಂಡರ್‌ಪಾಸ್‌ ನಲ್ಲಿ ಮುಳುಗಿದ ಕಾರು: ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮೃತ್ಯು

Advertisement
Advertisement

Udayavani is now on Telegram. Click here to join our channel and stay updated with the latest news.

Next