Advertisement

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

11:07 PM Jun 26, 2022 | Team Udayavani |

ಧಾರವಾಡ : ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಧಾರವಾಡ ಸಮೀಪ ವೆಂಕಟಾಪುರ ಕ್ರಾಸ್ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.

Advertisement

ಅಪಘಾತದಲ್ಲಿ ಬೋಗುರು ಗ್ರಾಮದ ಸುಶೀಲವ್ವ ಅರ್ಜುನ ಹರಿಜನ (35), ರಾಜು ಕಲ್ಲಪ್ಪ ಬರಮೇತ್ರಿ (32), ಕಲ್ಲವ್ವ ಫಕ್ಕಿರಪ್ಪ ಹುಚ್ಚಣ್ಣವರ (39) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಧಾರವಾಡ- ಬೆಳಗಾವಿ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೆಂಕರಾಪುರ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಗರಗ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next