Advertisement

ಕಲಬುರಗಿ : ಮದುವೆ ಆಮಂತ್ರಣ ಪತ್ರಿಕೆ ಕೊಡಲು ಹೋದವರ ಬೈಕ್ ಅಪಘಾತ : ಮದುಮಗ ಸೇರಿ ಇಬ್ಬರು ಸಾವು

08:44 PM Apr 07, 2022 | Team Udayavani |

ಕಲಬುರಗಿ : ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಸಂಭವಿಸಿದೆ.

Advertisement

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ ( 30) ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಹೀಗಾಗಿ ಸಂಬಂಧಿಕರಿಗೆ ಮದುವೆ ಆಮಂತ್ರಣ ಪತ್ರ ಕೊಡಲು ಜೇರಟಗಿಯತ್ತ ತೆರಳುತ್ತಿದ್ದರು. ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ವಿಜಯಪುರ ಜಿಲ್ಲೆಗೆ ಸೇರಿದ ಕಾರು ಎದುರಿಗೆ ಬಂದ ಬೈಕ್‌ ಗೆ ಡಿಕ್ಕಿ ಹೊಡೆಯಿತು.  ಪರಿಣಾಮ ಓರ್ವನ ದೇಹ ಸುಮಾರು 300 ಮೀಟರ್ ದೂರದವರೆಗೂ ಎಳೆದುಕೊಂಡು ಹೋಗಿದ್ದರಿಂದ ಛಿದ್ರವಾಗಿದೆ.

ಇದನ್ನೂ ಓದಿ : ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಅಫಘಾತಕ್ಕೆ ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next