Advertisement

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

11:29 AM Sep 17, 2024 | Team Udayavani |

ಕಾಪು : ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಖಾಸಗಿ ಸರ್ವಿಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಿಗ್ಗೆ ಕಾಪುವಿನಲ್ಲಿ ನಡೆದಿದೆ.

Advertisement

ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ದಂಡತೀರ್ಥದಲ್ಲಿ ಈ ಘಟನೆ ಸಂಭವಿಸಿದ್ದು ಬಸ್ಸಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗಳುಂಟಾಗಿವೆ.

ಉಡುಪಿಯಿಂದ ಕಾಪುವಿಗೆ ಬರುತ್ತಿದ್ದ ಬಸ್ ನಲ್ಲಿ 6-7 ಮಂದಿ ಪ್ರಯಾಣಿಕರು ಮಾತ್ರ ಇದ್ದುದ್ದರಿಂದ ಮತ್ತು ಬಸ್ ಕೂಡಾ ನಿಧಾನವಾಗಿ ಸಂಚರಿಸುತ್ತಿದ್ದುದರಿಂದ ಹೆಚ್ಚಿನ ಅಪಾಯವುಂಟಾಗಿಲ್ಲ.

ಸ್ಥಳೀಯರು ಬಸ್ ನಲ್ಲಿದ್ದವರಿಗೆ ಹೊರಗೆ ಬರಲು ಸಹಕರಿಸಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 

Advertisement

Advertisement

Udayavani is now on Telegram. Click here to join our channel and stay updated with the latest news.

Next