Advertisement

ಮಂಗಳೂರು: ಬೈಕ್‌ ಢಿಕ್ಕಿ: ಮಹಿಳೆ ಸಾವು

10:47 PM Apr 26, 2023 | Team Udayavani |

ಮಂಗಳೂರು: ಬೈಕ್‌ ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ಬುಧವಾರ ಯೆಯ್ನಾಡಿ ಕೊಂಚಾಡಿ ಬಳಿ ಸಂಭವಿಸಿದೆ.

Advertisement

ಸರಿತಾ ಜುಡಿತ್‌ ಪಿಂಟೋ (65) ಮೃತಪಟ್ಟವರು. ಅವರು ಎಂದಿನಂತೆ ಗುಜರಿ ಹೆಕ್ಕಲು ಗೋಣಿ ಚೀಲ ಹಿಡಿದುಕೊಂಡು ಬೆಳಗ್ಗೆ 6 ಗಂಟೆಯ ಸುಮಾರಿಗೆ ಯೆಯ್ನಾಡಿ ಕೊಂಚಾಡಿ ಶಂಕರ ಭವನ ಹೊಟೇಲ್‌ ಬಳಿ ಪದವಿನಂಗಡಿ ಕಡೆಯಿಂದ ಕೆಪಿಟಿ ಕಡೆಗೆ ಹೋಗುವ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅದೇ ರಸ್ತೆಯಲ್ಲಿ ಪದವಿನಂಗಡಿ ಕಡೆಯಿಂದ ಬರುತ್ತಿದ್ದ ಬೈಕ್‌ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಮತ್ತು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅವರು ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next