Advertisement

ಸಾರಿಗೆ ಬಸ್‌- ಕಾರು ನಡುವೆ ಡಿಕ್ಕಿ : ಮನ್‌ಮುಲ್‌ ನಿರ್ದೇಶಕನಿಗೆ ಗಂಭೀರ ಗಾಯ

05:02 PM Mar 27, 2022 | Team Udayavani |

ಮೇಲುಕೋಟೆ: ಸಮೀಪದ ಕಣಿವೆ ಬಳಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಡಿಕ್ಕಿ ಸಂಭವಿಸಿ ಮನ್‌ಮುಲ್‌ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Advertisement

ಮೇಲುಕೋಟೆ ಕಡೆಯಿಂದ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಒಪ್ಪಂದದ ಬಸ್‌ ಮತ್ತು ಜಕ್ಕನಹಳ್ಳಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಮುಖಾಮುಖೀ ಡಿಕ್ಕಿಯಾಗಿದೆ. ಕಾರು ಚಲಾಯಿಸುತ್ತಿದ್ದ ಚಾಲಕ ಮತ್ತು ಮನ್‌ಮುಲ್‌ ನಿರ್ದೇಶಕ ರಾಮಚಂದ್ರುಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಮುಖಂಡ ಬಲರಾಮೇಗೌಡ ಮತ್ತು ಶೇಖರ್‌ ಅಪಘಾತದಿಂದ ಗಾಯಗೊಂಡಿದ್ದ ರಾಮಚಂದ್ರ ಮತ್ತು ಚಾಲಕನನ್ನು ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಮೇಲುಕೋಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಅನ್ನು ವಶಕ್ಕೆ ಪಡಿದಿದ್ದಾರೆ. ಅಪಘಾತದ ರಭಸಕ್ಕೆ ರಾಮಚಂದ್ರು ಪ್ರಯಾಣಿಸುತ್ತಿದ್ದ ಕಾರು ನುಜ್ಜುಗುಜಾjಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಇದನ್ನೂ ಓದಿ : ರಾಮ-ಲಕ್ಷ್ಮಣ ಜೋಡುಕರೆ ಕಂಬಳದಲ್ಲಿ ಶಾಸಕ ಭರತ್ ಶೆಟ್ಟಿಯವರ ಕಂಬಳ ಪ್ರೇಮ

Advertisement

Udayavani is now on Telegram. Click here to join our channel and stay updated with the latest news.

Next