ಸುಳ್ಯ: ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಲಿ ಉದ್ಯೋಗದಲ್ಲಿದ್ದ ಸುಳ್ಯದ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ.
ಸುಳ್ಯದ ಕೇರ್ಪಳ ನಿವಾಸಿ ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಅವರ ಪುತ್ರ ಪ್ರಜ್ವಲ್ ಕೇರ್ಪಳ (25) ಮೃತ ಯುವಕ. ಪ್ರಜ್ವಲ್ ಪಾವಗಡದಲ್ಲಿ ಟೋಲ್ ಸೂಪರ್ವೈಸರ್ ಆಗಿ ಕೆಲಸದಲ್ಲಿದ್ದರು. ರವಿವಾರ ತಡರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದಾಗ ಟೋಲ್ ಸಮೀಪವೇ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ, ತಲೆ ರಸ್ತೆಗೆ ಬಡಿಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಪಾವಗಡ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.