Advertisement

Road Mishap; ಬಂಟ್ವಾಳ; ಬಸ್‌- ಕಾರು ಢಿಕ್ಕಿ: ಮೂವರಿಗೆ ಗಾಯ

10:45 PM Feb 17, 2024 | Team Udayavani |

ಬಂಟ್ವಾಳ: ಖಾಸಗಿ ಬಸ್‌ ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಹಾಗೂ ಬಸ್ಸಿನ ನಿರ್ವಾಹಕ, ಪ್ರಯಾಣಿಕೆ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ನಡೆದಿದೆ.

Advertisement

ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್‌ ಹಾಗೂ ಪ್ರಯಾಣಿಕೆ ಹೈಡ ಕುಟಿನ್ಹಾ ಗಾಯಗೊಂಡಿದ್ದಾರೆ. ಇವರಲ್ಲಿ ಹೊನ್ನಯ್ಯ ಪೂಜಾರಿ ಅವರು ಒಳರೋಗಿಯಾಗಿ ದಾಖಲಿಸಲ್ಪಟ್ಟಿದ್ದಾರೆ.

ಬಸ್‌ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದ ವೇಳೆ ಎದುರಿನಿಂದ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯಲ್ಲಿ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next