Advertisement

Road Mishap; ಬಳ್ಕೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು

07:35 PM May 14, 2024 | Team Udayavani |

ಬಸ್ರೂರು: ಸ್ಕೂಟರ್‌ಗೆ ಟಿಪ್ಪರ್‌ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಕೂರು ಗ್ರಾಮದ ಕಳುವಿನಬಾಗಿಲಿನ ವೆಂಟೆಡ್‌ ಡ್ಯಾಂ ಸಮೀಪ ಮಂಗಳವಾರ ಸಂಜೆ ಸಂಭವಿಸಿದೆ.

Advertisement

ಬಳ್ಕೂರು ನಿವಾಸಿ ಬಸವ ಪೂಜಾರಿ (60) ಮೃತಪಟ್ಟವರು. ಅವರು ತನ್ನ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಬಸ್ರೂರು ಕಡೆಗೆ ತೆರಳುತ್ತಿದ್ದ ಮರಳು ಸಾಗಾಟದ ಟಿಪ್ಪರ್‌ ಲಾರಿ ಢಿಕ್ಕಿಯಾಗಿ ಈ ಅವಘಡ ಸಂಭವಿಸಿತ್ತು. ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next