Advertisement

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

08:22 PM Sep 02, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ ಗೆ ಪಿಕ್ ಅಪ್ ವಾಹನ ಗುದ್ದಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಟ್ಟಣದ ಹೊರ ವಲಯದ ಕಲ್ಯಾಣ ಕೊಳದ ಬಳಿ ನಡೆದಿದೆ.

Advertisement

ತಾಲೂಕಿನ ಕಂದೇಗಾಲ ಗ್ರಾಮದ ಸಿದ್ದರಾಜು(46) ಮೃತ ಬೈಕ್ ಸವಾರ.

ಈತ ಪಟ್ಟಣದ ಸ್ವಗ್ರಾಮಕ್ಕೆ ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಪಿಕ್ ಅಪ್ ವಾಹನವೊಂದು ಗುದ್ದಿ ಪರಾರಿಯಾಗಿದೆ. ಘಟನೆಯಲ್ಲಿ ಸಿದ್ದರಾಜು ತಲೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿ ಮೃತ ಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತನ ಬೈಕ್ ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಇನ್ನೂ ಡಿಕ್ಕಿ ಹೊಡೆದು ಪರಾರಿಯಾದ ಪಿಕ್ ಅಪ್ ವಾಹನದ ಪತ್ತೆ ಕಾರ್ಯಪ್ರವೃತ್ತರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next