Advertisement

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

12:20 AM May 05, 2024 | Team Udayavani |

ಬಾಗಲಕೋಟೆ: ಜಿಲ್ಲೆಯ ಜಾಗೃತ ಮಠವೆಂದೇ ಖ್ಯಾತಿ ಪಡೆದ ಇಳಕಲ್ಲ ತಾಲೂಕಿನ ಸಿದ್ದನಕೊಳ್ಳದ ಡಾ| ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಶ್ರೀಗಳು ಗಾಯಗೊಂಡಿದ್ದಾರೆ.

Advertisement

ಶನಿವಾರ ಬೆಳಗ್ಗೆ ಅಮೀನಗಡ ಹತ್ತಿರ ರಾಯಚೂರು-ಬೆಳಗಾವಿ ಹೆದ್ದಾರಿ ಮೇಲೆ ಎದುರಿಗೆ ಬರುತ್ತಿದ್ದ ಟಿಪ್ಪರ್‌ ಹಾಗೂ ಸ್ವಾಮೀಜಿ ಇದ್ದ ಕಾರು ಮುಖಾಮುಖಿ ಢಿಕ್ಕಿಯಾ ಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ಸ್ವಾಮೀಜಿ ಕಾಲು ಮತ್ತು ತಲೆಗೆ ತೀವ್ರ ಪೆಟ್ಟಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next