Advertisement

Road Mishap; ಚಂದಳಿಕೆ: ಟಿಟಿ ವಾಹನ ಪಲ್ಟಿ, ಆರು ಮಂದಿಗೆ ಗಾಯ

07:02 PM Jan 16, 2024 | Team Udayavani |

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ. ವಾಹನ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ಸಂಭವಿಸಿದೆ.

Advertisement

ಶಬರಿಮಲೆಯಿಂದ ವಿಟ್ಲ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆಯ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ನಡೆದಿದೆ.

ಟಿ.ಟಿ. ವಾಹನದಲ್ಲಿದ್ದ ಆರು ಮಂದಿ ಶಬರಿಮಲೆಗೆ ತೆರಳಿದ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ ಯಾತ್ರೆ ಮುಗಿಸಿಕೊಂಡು ಹಿಂತಿರುಗುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next