Advertisement

Road Mishap ವಿಟ್ಲ : ಕಾರು-ದ್ವಿಚಕ್ರ ವಾಹನಕ್ಕೆ ಢಿಕ್ಕಿ, ಸವಾರ ಗಂಭೀರ

08:54 PM Aug 12, 2024 | Team Udayavani |

ವಿಟ್ಲ: ವಿಟ್ಲ-ಸಾಲೆತ್ತೂರು ಮಾರ್ಗದಲ್ಲಿ ಕಾರು, ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

Advertisement

ವೀರಕಂಭ ಗ್ರಾಮದ ನಿವಾಸಿ ಉಮೇಶ್‌ (38) ಗಾಯಗೊಂಡವರು. ಅವರು ದ್ವಿಚಕ್ರ ವಾಹನದಲ್ಲಿ ವಿಟ್ಲದ ಕಡೆಗೆ ಆಗಮಿಸುತ್ತಿದ್ದಾಗ, ವಿಟ್ಲ ಕಸಬಾ ಗ್ರಾಮದ ವಿಟ್ಲ ನಾಡ ಕಚೇರಿ ಬಳಿಯಲ್ಲಿ ಕಾರನ್ನು ಚಾಲಕ ಸಾಲೆತ್ತೂರು ಕಡೆಯಿಂದ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ ದ್ವಿಚಕ್ರ ವಾಹನದ ಹಿಂಬದಿಗೆ ಢಿಕ್ಕಿ ಹೊಡೆಸಿದ್ದ. ಗಾಯಾಳು ಸ್ಥಳೀಯ ಆರೋಗ್ಯ ಕೆಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next