Advertisement

Road Mishap; ಗುಂಡ್ಲುಪೇಟೆ: ಬೈಕ್-ಕಾರು ಅಪಘಾತ: ಸವಾರ ಸಾವು

07:17 PM May 22, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಊಟಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 209 ಗರಗನಹಳ್ಳಿ ಗೇಟ್ ಬಳಿಯಲ್ಲಿ ಬುಧವಾರ ನಡೆದಿದೆ.

Advertisement

ತಾಲೂಕಿನ ಆಲುತ್ತೂರು ಗ್ರಾಮದ ಬೈಕ್ ಸವಾರ ಮಲ್ಲೇಶ್(23) ಮೃತ ಯುವಕ.

ಹಿಂಬದಿಯಲ್ಲಿ ಕುಳಿತಿದ್ದ ಮಾನಸ ಎಂಬುವವರಿಗೆ ತೀವ್ರ ಗಾಯಾಳುಗಳಾಗಿದ್ದು, ಈ ಇಬ್ಬರು ಅಣ್ಣ-ತಂಗಿ ಎನ್ನಲಾಗುತ್ತಿದೆ.

ಆಲತ್ತೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸವಾರನ ತಲೆ ಹಾಗೂ ಕೈ ಕಾಲಿಗೆ ತೀವ್ರತರವಾದ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಅರಿತ ಬೇಗೂರು ಠಾಣೆ ಪೊಲೀಸರು ಕೂಡಲೇ ಆಗಮಿಸಿ 108 ಆಂಬುಲೆನ್ಸ್ ನಲ್ಲಿ ಗಾಯಾಳುಗಳನ್ನು ಬೇಗೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬೈಕ್ ಸವಾರ ಮಲ್ಲೇಶ್ ಮೃತಪಟ್ಟಿದ್ದಾರೆ.

Advertisement

ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಬೇಗೂರು ಪೊಲೀಸರು ಎರಡು ವಾಹನಗಳನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next