Advertisement

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

01:03 AM Oct 14, 2024 | Team Udayavani |

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬದ ಹೊಸಮಠ ಸೇತುವೆಯ ಅನತಿ ದೂರದಲ್ಲಿ ಎರಡು ಕಾರುಗಳು ಪರಸ್ಪರ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು, ಎರಡೂ ಕಾರಿನಲ್ಲಿದ್ದವರು ಅಪಾಯದಿಂದ ಪಾರಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಸುಬ್ರಹ್ಮಣ್ಯದ ಕುಲ್ಕುಂದ ನಿವಾಸಿ ಚೇತನ್‌ ಅವರು ಉಪ್ಪಿನಂಗಡಿ ಕಡೆಯಿಂದ ಚಲಾಯಿಸಿಕೊಂಡು ಬಂದು ಕಾರು ಬಲ್ಯ ಗ್ರಾಮದ ಬೀರುಕ್ಕು ನಿವಾಸಿ ಹರಿಶ್ಚಂದ್ರ ಅವರು ಚಲಾಯಿಸಿಕೊಂಡು ಹೊಸಮಠ ಪೇಟೆಯಿಂದ ಮನೆಗೆ ಹೋಗುತ್ತಿದ್ದಾಗ ಕಾರಿಗೆ ಢಿಕ್ಕಿ ಹೊಡೆದಿದೆ.

ಎರಡೂ ಕಾರುಗಳು ನಜ್ಜುಗುಜ್ಜಾಗಿ ಪಕ್ಕದ ಚರಂಡಿಗೆ ಬಿದ್ದಿವೆ. ಚೇತನ್‌ ಅವರ ಕಾರಿನಲ್ಲಿ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದುತಿಳಿದು ಬಂದಿದೆ.

ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next