Advertisement

Road Mishap: ಮಾನವೀಯತೆ ಮೆರೆದ ಶಿರ್ವ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿ

03:02 PM Apr 12, 2024 | Team Udayavani |

ಶಿರ್ವ: ಶಿರ್ವ ಗ್ರಾ.ಪಂ.ನ ಮಟ್ಟಾರು ಎಸ್‌ಎಲ್‌ಆರ್‌ಎಂ ಘಟಕದ ಬಳಿ ನಾಯಿಯೊಂದು ಅಡ್ಡಬಂದು ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ  ಹೋಗುತ್ತಿದ್ದ ಮಹಿಳೆಯರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಶಿರ್ವ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿ ಸ್ವತ್ಛವಾಹಿನಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಕಾಪು ಖಾಸಗಿ ಕಾಲೇಜಿನ ಉಪನ್ಯಾಸಕಿಯರಾದ ಜಯಲಕ್ಷ್ಮೀ ಮತ್ತು ವಿನುತಾ ಕಾರ್ಕಳದಿಂದ ಕಾಪುವಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮಟ್ಟಾರು ಎಸ್‌ಎಲ್‌ಆರ್‌ಎಂ ಘಟಕದ ಬಳಿ ನಾಯಿ ಅಡ್ಡ ಬಂದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಏಳಲೂ ಆಗದೆ, ಮಾತನಾಡಲೂ ಆಗದ ಸ್ಥಿತಿಯಲ್ಲಿದ್ದರು.

ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ವಾಹನ ಸಿಗದ ಕಾರಣ ಮಟ್ಟಾರು ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಧಾವಿಸಿ ಗಾಯಾಳುಗಳನ್ನು ಘಟಕದ ಸ್ವಚ್ಛ ವಾಹಿನಿ ವಾಹನದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಓರ್ವ ಮಹಿಳೆಗೆ ತಲೆಗೆ ಗಂಭೀರ ಗಾಯವಾಗಿದ್ದು,ಮತ್ತೋರ್ವ ಮಹಿಳೆಗೆ ಕಾಲಿಗೆ ತೀವ್ರ ತರಹದ ಗಾಯವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಒಬ್ಬರನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಂಬುಲೆನ್ಸ್‌ನಲ್ಲಿ ಮತ್ತೂಬ್ಬರನ್ನು 108 ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಎಸ್‌ಎಲ್‌ಆರ್‌ಎಂ ಘಟಕದ ಸಿಬಂದಿ ದಾಖಲಿಸಿ ಗಾಯಾಳುಗಳ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಘಟಕದ ಸಿಬಂದಿಗಳ ಮಾನವೀಯ ಸ್ಪಂದನೆಗೆ ನಾಗರಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next