Advertisement

Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ

08:16 PM Jun 05, 2023 | Team Udayavani |

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗುವ ತೋಡಾರಿನ ಹಂಡೇಲ್‌ನಲ್ಲಿ ಖಾಸಗಿ ಬಸ್ಸೊಂದು ಬೈಕ್‌ ಗೆ ಢಿಕ್ಕಿಹೊಡೆದ ಪರಿಣಾಮವಾಗಿ ಬೈಕ್‌ ಸವಾರ ಆಳ್ವಾಸ್‌ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್‌ ಆಚಾರ್ಯ (19) ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

Advertisement

ಮೃತ ಕಾರ್ತಿಕ್‌ ಆಚಾರ್ಯ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ನ ಚಂದ್ರಹಾಸ ಆಚಾರ್ಯ ಅವರ ಏಕೈಕ ಪುತ್ರ, ಇನ್ನೊಬ್ಟಾಕೆ ದ್ವಿತೀಯ ಪಿಯುಸಿಯಲ್ಲಿದ್ದಾರೆ.

ಕಾರ್ತಿಕ್‌ ತರಗತಿ ಮುಗಿಸಿ ತನ್ನ ಬೈಕ್‌ ನಲ್ಲಿ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಮತ್ತೊಂದು ಬಸ್ಸನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ ಗೆ ಢಿಕ್ಕಿ ಹೊಡೆದಿದೆ. ಕಾರ್ತಿಕ್‌ ಹೆಲ್ಮೆಟ್‌ ಧರಿಸಿದ್ದರೂ ಬಸ್‌ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಪ್ರಾಣ ಕಳಕೊಳ್ಳುವಂತಾಯಿತೆನ್ನಲಾಗಿದೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next